ಕೀರ್ತನೆಗಳು 14 - ಕನ್ನಡ ಸತ್ಯವೇದವು C.L. Bible (BSI)ನಾಸ್ತಿಕರ ದುಸ್ಥಿತಿ ( ಕೀರ್ತ. 53 ) 1 “ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II 2 ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II 3 ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II 4 ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I 5 ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II 6 ಕೆಡಿಸಬಹುದವರು ಬಡಜನರ ಯೋಜನೆಯನು I ಪ್ರಭುವಾದರೊ ಅವರಿಗೆ ಆಶ್ರಯವಾಗಿರುವನು II 7 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India