2 ಸಮುಯೇಲ 5 - ಕನ್ನಡ ಸತ್ಯವೇದವು J.V. (BSI)ದಾವೀದನು ಯೆಹೂದ್ಯರ ಮತ್ತು ಇಸ್ರಾಯೇಲ್ಯರ ಅರಸನಾಗಿ ನಡಿಸಿದ ವಿಶೇಷಕಾರ್ಯಗಳು ( 5—12 ) ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿದ್ದೂ ಯೆರೂಸಲೇಮ್ ಪಟ್ಟಣವು ರಾಜಧಾನಿಯಾದದ್ದೂ 1 ಅನಂತರ ಇಸ್ರಾಯೇಲ್ಯರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ - 2 ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು. 3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು. 4 ದಾವೀದನು ಮೂವತ್ತು ವರುಷದವನಾದಾಗ ಅರಸನಾಗಿ ನಾಲ್ವತ್ತು ವರುಷ ಆಳಿದನು. 5 ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದಕುಲವೊಂದನ್ನೇ ಆಳಿದ್ದು ಏಳು ವರುಷವೂ ಆರು ತಿಂಗಳೂ; ಯೆರೂಸಲೇವಿುನಲ್ಲಿದ್ದುಕೊಂಡು ಯೆಹೂದ್ಯರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಆಳಿದ್ದು ಮೂವತ್ತುಮೂರು ವರುಷ. 6 ದಾವೀದನು ತನ್ನ ಜನರನ್ನು ಕರಕೊಂಡು ಯೆರೂಸಲೇವಿುನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರಲಾರನೆಂದು ನೆನಸಿ ದಾವೀದನಿಗೆ - ನೀನು ಒಳಗೆ ಬರಲಾರಿ; ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು ಎಂದು ಹೇಳಿದರು. 7 ಆದರೂ ಅವನು ಈಗ ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು. 8 ಆ ದಿವಸ ದಾವೀದನು - ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲಿ ಹತ್ತಿಹೋಗಿ ದಾವೀದನಿಗೆ ಅಸಹ್ಯರಾಗಿರುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ ಎಂದು ಹೇಳಿದನು. ಆದದರಿಂದ ಕುರುಡರೂ ಕುಂಟರೂ ಇದ್ದಾರೆ, ಒಳಗೆ ಹೋಗಲಾಗದು ಎಂದು ಗಾದೆಯುಂಟು. 9 ದಾವೀದನು ಆ ಕೋಟೆಗೆ ದಾವೀದನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ ಅದರ ಸುತ್ತಲೂ ವಿುಲ್ಲೋವಿನಿಂದ ಪ್ರಾರಂಭಿಸಿ ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು. 10 ಸೇನಾಧೀಶ್ವರನಾದ ಯೆಹೋವದೇವರು ಅವನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಹೊಂದುತ್ತಾ ಹೋದನು. 11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು. 12 ಇದರಿಂದ ದಾವೀದನು - ಯೆಹೋವನು ನನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿ ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದನೆಂದು ತಿಳಿದುಕೊಂಡನು. 13 ದಾವೀದನು ಹೆಬ್ರೋನಿನಿಂದ ಯೆರೂಸಲೇವಿುಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣುಮಕ್ಕಳು ಹುಟ್ಟಿದರು. 14 ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು - ಶಮ್ಮೂವ, ಶೋಬಾಬ್, 15 ನಾತಾನ್, ಸೊಲೊಮೋನ್, ಇಬ್ಹಾರ್, ಎಲೀಷೂವ, 16 ನೆಫೆಗ್, ಯಾಫೀಯ, ಎಲೀಷಾಮ, ಎಲ್ಯಾದ, ಎಲೀಫೆಲೆಟ್. ದಾವೀದನು ಫಿಲಿಷ್ಟಿಯರನ್ನು ಎರಡು ಸಾರಿ ಸೋಲಿಸಿದ್ದು 17 ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು. 18 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡಿದ್ದಾರೆಂದು ತಿಳಿದು 19 ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ 20 ಅವನು ಹೋಗಿ ಅವರನ್ನು ಸೋಲಿಸಿ ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆಂದು ಹೇಳಿ ಆ ಯುದ್ಧಸ್ಥಳಕ್ಕೆ ಬಾಳ್ಪೆರಾಚೀಮೆಂದು ಹೆಸರಿಟ್ಟನು. 21 ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು. 22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳುಕೊಂಡರು. 23 ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು. 24 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಅವರ ಮೇಲೆ ಬೀಳು ಅಂದನು. 25 ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India