Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಅಪೊಸ್ತಲರ ಕೃತ್ಯಗಳು 9 - ಕನ್ನಡ ಸತ್ಯವೇದವು J.V. (BSI)


ಸಭೆಯವರನ್ನು ಹಿಂಸೆಪಡಿಸಿದ ಸೌಲನು ತಾನೇ ಯೇಸುವಿನ ಶಿಷ್ಯನಾದದ್ದು

1 ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ -

2 ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಆಕಾಶದೊಳಗಿಂದ ಒಂದು ಬೆಳಕು ಅವನ ಸುತ್ತಲು ವಿುಂಚಿತು.

4 ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.

5 ಅವನು - ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು.

6 ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

7 ಅವನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.

8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.

9 ಅವನು ಮೂರು ದಿವಸ ಕಣ್ಣುಕಾಣದೆ ಏನೂ ತಿನ್ನಲಿಲ್ಲ; ಏನೂ ಕುಡಿಯಲಿಲ್ಲ.

10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ - ಅನನೀಯನೇ, ಎಂದು ಅವನನ್ನು ಕರೆಯಲು ಅವನು - ಕರ್ತನೇ, ಇಗೋ, ಇದ್ದೇನೆ ಅಂದನು.

11 ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ.

12 ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣುಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ನೋಡಿದ್ದಾನೆ ಎಂದು ಹೇಳಿದನು.

13 ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;

14 ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮಹಾಯಾಜಕರಿಂದ ಹೊಂದಿದ್ದಾನೆ ಅಂದನು.

15 ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.

16 ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.

18 ಕೂಡಲೆ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.

19 ತರುವಾಯ ಊಟಮಾಡಿ ಬಲ ಹೊಂದಿದನು.

20 ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.

21 ಕೇಳಿದವರೆಲ್ಲರು ಬೆರಗಾಗಿ - ಈ ಹೆಸರು ಹೇಳುವವರನ್ನು ಯೆರೂಸಲೇವಿುನಲ್ಲಿ ಹಾಳುಮಾಡಿದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮಹಾಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದೇ ಇಲ್ಲಿಗೆ ಬಂದನಲ್ಲವೇ ಎಂದು ಮಾತಾಡಿಕೊಂಡರು.

22 ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರಾಗ ಮಾಡಿದನು.

23 ಅನೇಕ ದಿವಸಗಳು ಹೋದ ಮೇಲೆ ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆಮಾಡಿಕೊಂಡರು.

24 ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

25 ಆದರೆ ಅವನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ ಒಂದು ಹೆಡಿಗೆಯಲ್ಲಿ ಕೂಡ್ರಿಸಿ ಗೋಡೆಯೊಳಗಿಂದ ಇಳಿಸಿದರು.

26 ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

27 ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.

28 ಆಮೇಲೆ ಅವನು ಯೆರೂಸಲೇವಿುನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸಿದನು.

29 ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತಾಡಿ ತರ್ಕಿಸುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.

30 ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

31 ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಐನೇಯನೆಂಬ ಪಾರ್ಶ್ವವಾಯುರೋಗಿ ಅದ್ಭುತವಾಗಿ ವಾಸಿಯಾದದ್ದು

32 ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸಿಯಾಗಿದ್ದ ದೇವಜನರ ಬಳಿಗೂ ಬಂದನು..

33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.

34 ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.

35 ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಸತ್ತುಹೋಗಿದ್ದ ದೊರ್ಕಳೆಂಬ ಒಬ್ಬ ಶಿಷ್ಯಳನ್ನು ಬದುಕಿಸಿದ್ದು

36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

37 ಆ ಕಾಲದಲ್ಲಿ ಆಕೆ ರೋಗದಲ್ಲಿ ಬಿದ್ದು ಸತ್ತಳು, ಮತ್ತು ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.

38 ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.

39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.

40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.

41 ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.

43 ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸದವರೆಗೂ ಇದ್ದನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು