ಆದಿಕಾಂಡ 33 - ಕನ್ನಡ ಸತ್ಯವೇದವು J.V. (BSI)ಯಾಕೋಬನು ಏಸಾವನನ್ನು ಸಂಧಿಸಿದ್ದು 1 ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಮನುಷ್ಯರ ಸಮೇತ ಬರುವದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ 2 ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಬರಮಾಡಿದನು. 3 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನಿಗೆ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬೊಗ್ಗಿ ನಮಸ್ಕರಿಸಿದನು. 4 ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು. 5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು. 6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು; 7 ಆಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು; ಕಡೆಯಲ್ಲಿ ಯೋಸೇಫನೂ ರಾಹೇಲಳೂ ಬಂದು ಎರಗಿದರು. 8 ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು. 9 ಏಸಾವನು - ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ ಅನ್ನಲು 10 ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ. 11 ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು. 12 ತರುವಾಯ ಏಸಾವನು - ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ; ನಾನು ಮುಂದಾಗಿ ಹೋಗುತ್ತೇನೆ ಅಂದನು. 13 ಅದಕ್ಕೆ ಯಾಕೋಬನು - ನನ್ನ ಮಕ್ಕಳು ಎಳೇ ಪ್ರಾಯದವರು; ಅದಲ್ಲದೆ ಈದಿರುವ ದನಕುರಿಗಳು ನನ್ನ ಬಳಿಯಲ್ಲಿರುವದು ಪ್ರಭುವಿಗೆ ತಿಳಿದಿದೆ; ಒಂದೇ ದಿನ ಹೆಚ್ಚಾಗಿ ದಾರಿ ನಡಿಸಿದರೆ ಆಡುಕುರಿಗಳೆಲ್ಲವೂ ಸತ್ತು ಹೋದಾವು. 14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೊರಡಬಹುದು. ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ ಅಂದನು. 15 ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು. 16 ಏಸಾವನು ಆ ದಿವಸವೇ ಸೇಯೀರ್ ಸೀಮೆಗೆ ಹೊರಟು ಹೋದನು. 17 ಯಾಕೋಬನು ಪ್ರಯಾಣ ಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಚಪ್ಪರಗಳನ್ನೂ ಮಾಡಿಸಿದನು; ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು. ಯಾಕೋಬನ ಮಗಳಿಗೆ ಶೆಕೆವಿುನ ಪಟ್ಟಣದಲ್ಲಿ ಮಾನಭಂಗವಾದ್ದರಿಂದ ಆಕೆಯ ಅಣ್ಣಂದಿರು ಆ ಪಟ್ಟಣದವರನ್ನು ಸಂಹರಿಸಿದ್ದು 18 ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು. 19 ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂವಿುಯನ್ನು ಹಮೋರನ ಮಕ್ಕಳಿಗೆ ನೂರು ವರಹಾ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ. 20 ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India