ಕೀರ್ತನೆಗಳು 2 - ಕನ್ನಡ ಸತ್ಯವೇದವು J.V. (BSI)ಯೆಹೋವನು ಅಭಿಷೇಕಿಸಿದವನ ಸರ್ವಾಧಿಪತ್ಯ ( ಕೀರ್ತ. 110 ) 1 ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ? 2 ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. 3 ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತು ಬೇಡಿಗಳನ್ನು ಮುರಿದು ಬೀಸಾಡೋಣ ಎಂದು ಮಾತಾಡಿಕೊಳ್ಳುತ್ತಾರಲ್ಲಾ. 4 ಪರಲೋಕದಲ್ಲಿ ಆಸನಾರೂಢನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು. 5 ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ 6 ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು. 7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ. 8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನ ಮಾಡುವೆನು; ಭೂವಿುಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು. 9 ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು. 10 ಆದದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; ದೇಶಾಧಿಪತಿಗಳಿರಾ, ಬುದ್ಧಿಮಾತುಗಳಿಗೆ ಕಿವಿಗೊಡಿರಿ. 11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ. 12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India