ನ್ಯಾಯಸ್ಥಾಪಕರು 8 - ಕನ್ನಡ ಸತ್ಯವೇದವು J.V. (BSI)ಎಫ್ರಾಯೀಮ್ಯರು ಸಿಟ್ಟಿನಿಂದ ಗಿದ್ಯೋನನೊಡನೆ ಕಲಹಮಾಡಿದ್ದು 1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ - ನೀನು ಹೀಗೆ ಯಾಕೆ ಮಾಡಿದಿ? ವಿುದ್ಯಾನ್ಯರೊಡನೆ ಯುದ್ಧಮಾಡುವದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ ಎಂದು ಉಗ್ರದಿಂದ ಕಲಹಮಾಡಿದರು. 2 ಆಗ ಅವನು ಅವರಿಗೆ - ನೀವು ಮಾಡಿದ ಕಾರ್ಯಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದೆನು? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ. 3 ದೇವರು ನಿಮ್ಮ ಕೈಯಲ್ಲಿ ವಿುದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು. ಗಿದ್ಯೋನನು ಯೊರ್ದನಿನ ಆಚೆಯಲ್ಲಿ ವಿುದ್ಯಾನ್ಯರನ್ನು ಸೋಲಿಸಿದ್ದು 4 ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದವರಾಗಿದ್ದರೂ ಹಿಂದಟ್ಟುತ್ತಾ ಯೊರ್ದನನ್ನು ದಾಟಿ [ಸುಖೋತಿಗೆ] ಬಂದರು. 5 ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು. 6 ಆದರೆ ಸುಖೋತಿನ ಮುಖಂಡರು ಅವನಿಗೆ - ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ ಎಂದು ಉತ್ತರಕೊಟ್ಟರು. 7 ಆಗ ಗಿದ್ಯೋನನು ಅವರಿಗೆ - ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು ಎಂದು ಹೇಳಿದನು. 8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು. 9 ಗಿದ್ಯೋನನು ಅವರಿಗೆ - ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು ಅಂದನು. 10 ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ. 11 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು. 12 ಜೆಬಹನೂ ಚಲ್ಮುನ್ನನೂ ಓಡಿ ಹೋಗಲಾಗಿ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿ ಬಿಟ್ಟನು. 13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು 14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರಿಸಿಕೊಂಡನು. 15 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ - ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ ಎಂದು ನನ್ನನ್ನು ನಿಂದಿಸಿದಿರಲ್ಲಾ; 16 ನೋಡಿರಿ, ಅವರು ಇಲ್ಲಿರುತ್ತಾರೆ ಅಂದು ಊರಿನ ಹಿರಿಯರನ್ನೂ ಮುಖಂಡರನ್ನೂ ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು. 17 ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಹತಿಸಿದನು. 18 ಮತ್ತು ಅವನು ಜೆಬಹ, ಚಲ್ಮುನ್ನ ಎಂಬವರನ್ನು - ನೀವು ತಾಬೋರದಲ್ಲಿ ಕೊಂದು ಹಾಕಿದ ಮನುಷ್ಯರು ಹೇಗಿದ್ದರು ಎಂದು ಕೇಳಲಾಗಿ ಅವರು ಅವನಿಗೆ - ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು ಎಂದು ಉತ್ತರಕೊಟ್ಟರು. 19 ಆಗ ಅವನು - ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿದ್ದಿಲ್ಲ ಎಂದು ಹೇಳಿ 20 ತನ್ನ ಹಿರೀ ಮಗನಾದ ಎತೆರನಿಗೆ - ನೀನೆದ್ದು ಇವರನ್ನು ಕೊಂದುಹಾಕು ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ. 21 ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು. ಗಿದ್ಯೋನನ ಚರಿತ್ರೆಯ ಸಮಾಪ್ತಿ 22 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ - ನೀನು ನಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು ಅನ್ನಲು 23 ಅವನು ಅವರಿಗೆ - ನಾನಾಗಲಿ ನನ್ನ ಮಗನಾಗಲಿ ನಿಮ್ಮನ್ನು ಆಳುವದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು. 24 ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆ ಹೊಡೆದ ಮುರುವುಗಳನ್ನು ನನಗೆ ಕೊಡಲಿ ಅಂದನು. ವಿುದ್ಯಾನ್ಯರು ಇಷ್ಮಾಯೇಲ್ಯರಾಗಿದ್ದದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು - 25 ನಾವು ಸಂತೋಷದಿಂದ ಕೊಡುವೆವು ಎಂದು ಹೇಳಿ ಅಲ್ಲಿ ಒಂದು ಬಟ್ಟೆಯನ್ನು ಹಾಸಿ ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಮುರುವುಗಳನ್ನು ಇಟ್ಟುಬಿಟ್ಟರು. 26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ವಿುದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು. 27 ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು. 28 ವಿುದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ತಿರಿಗಿ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರುಷಗಳ ಪರ್ಯಂತ ದೇಶದಲ್ಲಿ ಸಮಾಧಾನವಿತ್ತು. 29 ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು. 30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು. 31 ಅವನು ಶೆಕೆವಿುನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು ಅವನಿಗೆ ಅಬೀಮೆಲೆಕನೆಂದು ಹೆಸರಿಟ್ಟನು. 32 ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು. 33 ಗಿದ್ಯೋನನು ಸತ್ತನಂತರ ಇಸ್ರಾಯೇಲ್ಯರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ಬೆರೀತನನ್ನು ತಮಗೆ ದೇವರು ಮಾಡಿಕೊಂಡರು. 34 ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು. 35 ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India