Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯಾಜಕಕಾಂಡ 4 - ಕನ್ನಡ ಸತ್ಯವೇದವು J.V. (BSI)


ತಿಳಿಯದೆ ತಪ್ಪು ಮಾಡಿದವನಿಗೆ ದೋಷಪರಿಹಾರ ಮಾಡುವ ಕ್ರಮ

1 ಯೆಹೋವನು ಮೋಶೆಗೆ ಇಂತೆಂದನು -

2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]

3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

4 ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಲಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬಂದು

6 ಅದರಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರಸ್ಥಾನದ ಮುಂದಣ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿವಿುಕಿಸಬೇಕು.

7 ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ ಹೋರಿಯ ವಿುಕ್ಕ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

8 ಆ ದೋಷ ಪರಿಹಾರಕಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ವಪೆಯನ್ನೂ ಕರುಳುಗಳ ಮೇಲಣ ಕೊಬ್ಬನ್ನೂ

9 ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ

10 ಅದನ್ನೆಲ್ಲಾ ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮವೇದಿಯ ಮೇಲೆ ಹೋಮಮಾಡಬೇಕು.

11 ಆ ಹೋರಿಯಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಕರುಳುಗಳು,

12 ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿರಿಸಿ ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

13 ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ

14 ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದನಂತರ ಅದನ್ನು ಪರಿಹರಿಸಿಕೊಳ್ಳುವದಕ್ಕಾಗಿ [ಪೂರ್ಣಾಂಗವಾದ] ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತರಿಸಿದಾಗ

15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು

17 ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿವಿುಕಿಸಬೇಕು.

18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

19 ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.

20 ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.

21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕಯಜ್ಞ.

22 ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

23 ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು;

24 ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕಯಜ್ಞ.

25 ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

26 ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

27 ನಿಮ್ಮ ದೇಶಸ್ಥರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

28 ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.

29 ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.

30 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

31 ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

33 ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಧಳದಲ್ಲೇ ಅದನ್ನು ದೋಷಪರಿಹಾರಾರ್ಥವಾಗಿ ವಧಿಸಬೇಕು.

34 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

35 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯಜ್ಞವೇದಿಯಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು