ಯೆರೆಮೀಯ 19 - ಕನ್ನಡ ಸತ್ಯವೇದವು J.V. (BSI)ಕೂಜದ ಸಾಮ್ಯ 1 ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು 2 ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ಹಿನ್ನೋಮ್ ತಗ್ಗಿಗೆ ಹೋಗಿ ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು - 3 ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು. 4 ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ 5 ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ; 6 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವದು; 7 ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು. 8 ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. 9 ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ ಬಹಳವಾಗಿ ಇರಕಿಸುವಾಗ ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ಇಷ್ಟ ವಿುತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ. 10 ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಕೂಜವನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು - 11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು. 12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು; 13 ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು. ಪಷ್ಹೂರನು ಯೆರೆಮೀಯನನ್ನು ಕೋಳಕ್ಕೆ ಹಾಕಿಸಿದ್ದು 14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು - 15 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India