Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಲೂಕ 18 - ಕನ್ನಡ ಸತ್ಯವೇದವು J.V. (BSI)


ಯೇಸು ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು

1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.

2 ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.

3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - ನ್ಯಾಯ ವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು ಎಂದು ಹೇಳಿಕೊಳ್ಳುತ್ತಿದ್ದಳು.

4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;

5 ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುವದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು; ಇಲ್ಲವಾದರೆ ಈಕೆಯು ಬಂದು ಬಂದು ಕಡೆಗೆ ನನ್ನನ್ನು ದಣಿಸಾಳು ಎಂದು ತನ್ನೊಳಗೆ ಅಂದುಕೊಂಡನು.

6 ಸ್ವಾವಿುಯು ಈ ಸಾಮ್ಯವನ್ನು ಹೇಳಿದ ಮೇಲೆ - ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.

7 ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.

8 ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.


ಪ್ರಾರ್ಥನೆಮಾಡುವದಕ್ಕಾಗಿ ದೇವಾಲಯಕ್ಕೆ ಹೋದ ಫರಿಸಾಯನನ್ನೂ ಸುಂಕದವನನ್ನೂ ಕುರಿತದ್ದು

9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.

10 ಅದೇನಂದರೆ - ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು.

11 ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.

12 ವಾರಕ್ಕೆ ಎರಡಾವರ್ತಿ ಉಪವಾಸ ಮಾಡುತ್ತೇನೆ; ನಾನು ಸಂಪಾದಿಸುವ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ ಅಂದುಕೊಂಡನು.

13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.

14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
( ಮತ್ತಾ. 19.13-15 ; ಮಾರ್ಕ. 10.13-16 )

15 ಕೆಲವರು ತಮ್ಮ ಕೂಸುಗಳನ್ನು ಸಹ ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಕಂಡು ಅವರನ್ನು ಗದರಿಸಿದರು.

16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.

17 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಅಂದನು.


ನಿತ್ಯಜೀವವನ್ನು ಹೇಗೆ ಪಡೆಯಬೇಕೆಂದು ಒಬ್ಬ ಐಶ್ವರ್ಯವಂತನು ಕೇಳಿದ್ದಕ್ಕೆ ಯೇಸು ಹಣದ ಭ್ರಾಂತಿಯಿಂದಾಗುವ ಕೇಡನ್ನು ತೋರಿಸಿದ್ದು
( ಮತ್ತಾ. 19.16-29 ; ಮಾರ್ಕ. 10.17-30 )

18 ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ

19 ಯೇಸು ಅವನಿಗೆ - ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.

20 ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.

21 ಅದಕ್ಕವನು - ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು

22 ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

23 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ವ್ಯಸನಗೊಂಡನು.

24 ಆಗ ಯೇಸು ಅವನನ್ನು ನೋಡಿ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.

25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.

26 ಈ ಮಾತನ್ನು ಕೇಳಿದವರು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು

27 ಆತನು - ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ ಅಂದನು.

28 ಆಗ ಪೇತ್ರನು - ಇಗೋ, ನಾವು ನಮ್ಮ ನಮ್ಮ ಮನೆಮಾರುಗಳನ್ನು ಬಿಟ್ಟು ನಿನ್ನ ಹಿಂದೆ ಬಂದೆವು ಎಂದು ಹೇಳಲು

29 ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯದ ನಿವಿುತ್ತ ಮನೆಯನ್ನಾಗಲಿ ಹೆಂಡತಿಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ತಂದೆತಾಯಿಗಳನ್ನಾಗಲಿ ಮಕ್ಕಳನ್ನಾಗಲಿ ಬಿಟ್ಟುಬಿಟ್ಟಿರುವನೋ

30 ಅವನಿಗೆ ಈಗಿನ ಕಾಲದಲ್ಲಿ ಅನೇಕ ಪಾಲು ಹೆಚ್ಚಾದವುಗಳು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು ಎಂದು ಹೇಳಿದನು.


ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
( ಮತ್ತಾ. 20.17-19 ; ಮಾರ್ಕ. 10.32-34 )

31 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.

32 ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಇವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು;

33 ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.

34 ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.


ಒಬ್ಬ ಕುರುಡನನ್ನು ಸ್ವಸ್ಥಮಾಡಿದ್ದು
( ಮತ್ತಾ. 20.29-34 ; ಮಾರ್ಕ. 10.46-52 )

35 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಮಗ್ಗುಲಲ್ಲಿ ಕೂತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು

36 ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.

37 ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ

38 ಅವನು - ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿ ಕೇಳಿಕೊಂಡನು.

39 ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.

40 ಆಗ ಯೇಸು ನಿಂತು ಅವನನ್ನು ತನ್ನ ಬಳಿಗೆ ಕರತರುವದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದನು.

41 ಆತನು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಅವನು - ನನಗೆ ಕಣ್ಣು ಬರುವಂತೆ ಮಾಡಬೇಕು, ಸ್ವಾಮೀ ಅಂದನು.

42 ಯೇಸು ಅವನಿಗೆ - ನಿನಗೆ ಕಣ್ಣು ಬರಲಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು.

43 ತಕ್ಷಣವೇ ಅವನಿಗೆ ಕಣ್ಣುಬಂದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು