ಅಪೊಸ್ತಲರ ಕೃತ್ಯಗಳು 28:4 - ದೆವಾಚಿ ಖರಿ ಖಬರ್4 ಪಾವ್ಲುಚ್ಯಾ ಹಾತಿಕ್ ಸುತ್ ಧರಲ್ಯಾ ಸಾಪಾಕ್ ಬಗಲಿ ದ್ವಿಪಾತ್ಲಿ ಲೊಕಾ, ಹ್ಯೊ ಖುನ್ಕಾರಿಚ್ ಹೊವ್ಕ್ ಫಿರೆ! ಸಮುಂದರಾತ್ನಾ ಚುಕುನ್ ಯೆಲ್ಯಾರ್ ಬಿ ತೆಚ್ಯಾ ನಸಿಬಾಕ್ ತೆಕಾ ಜಿವಾನಿ ಥವ್ತಲೆ ಮನ್ ನಾ ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |