Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:21
11 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.


ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.


ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.


ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು