Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಆಳುಗಳನ್ನು ಕಳುಹಿಸಿ ಅವನನ್ನು ಬಲಿಪೀಠದ ಬಳಿಯಿಂದ ಕರೆದುತರುವಂತೆ ಮಾಡಿದನು. ಅವನು ಬಂದು, ಅರಸ ಸೊಲೊಮೋನನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗಲು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ತರಿಸಿದನು. ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ, “ಮನೆಗೆ ಹೋಗು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:53
10 ತಿಳಿವುಗಳ ಹೋಲಿಕೆ  

ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.


ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.


ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಿದನು.


ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.


ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.


ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.


ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,


ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು