Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅರಸನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:5
12 ತಿಳಿವುಗಳ ಹೋಲಿಕೆ  

ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.


ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.


ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ


ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.


ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.


ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,


ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು