Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾವೀದನು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನಿಗೆ - ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ನನಗೆ ಅಪ್ಪಣೆಕೊಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದ್ದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:21
10 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.


ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ


ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು.


ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.


ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.


ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು.


ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು