Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಈ ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದ್ದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:28
13 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.


ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.


ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.


ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.


ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.


ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.


ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?


ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.


ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು