Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿವಿುತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದ್ದರಿಂದ ನಾನು ಸೊಲೊಮೋನನ ಕುಟುಂಬದಿಂದ ರಾಜ್ಯವನ್ನು ತೆಗೆದುಕೊಳ್ಳುತ್ತೇನೆ. ಆದರೆ ಸೊಲೊಮೋನನು ತನ್ನ ಜೀವಮಾನವೆಲ್ಲಾ ಆಳುವಂತೆ ನಾನು ಅವನಿಗೆ ಅವಕಾಶ ಕೊಡುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗಾಗಿ ಇದನ್ನು ಮಾಡುತ್ತೇನೆ. ನಾನು ದಾವೀದನನ್ನು ಆರಿಸಿಕೊಂಡೆನು; ಏಕೆಂದರೆ ಅವನು ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ ‘ಆದರೂ ನನ್ನ ಆಜ್ಞೆಗಳನ್ನೂ, ನನ್ನ ತೀರ್ಪುಗಳನ್ನೂ ಕೈಗೊಂಡದ್ದರಿಂದ, ನಾನು ಆಯ್ದು ತೆಗೆದುಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದುಕೊಳ್ಳದೆ, ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:34
11 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,


ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.


ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.


ಆದರೆ ಅದನ್ನು ಅವನ ಮಗನ ಕೈಯಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು