Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ತನ್ನ ಮನಸ್ಸಿನಲ್ಲಿ - ರಾಜ್ಯವು ತಿರಿಗಿ ದಾವೀದನ ಕುಟುಂಬದವರಿಗೆ ಆಗುವದೋ ಏನೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:26
17 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.


ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.


ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು