Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಜನರು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಾರ್ಪಣೆಗಾಗಿ ಹೋಗುವದಾದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗೀತು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:27
14 ತಿಳಿವುಗಳ ಹೋಲಿಕೆ  

ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.


ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.


ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ.


ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ


ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.


ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.


ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,


ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು