Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ ಇನ್ನೊಂದನ್ನು ದಾನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜನಾದ ಯಾರೊಬ್ಬಾಮನು ಒಂದು ಬಂಗಾರದ ಕರುವನ್ನು ಬೇತೇಲಿನಲ್ಲಿರಿಸಿದನು; ಮತ್ತೊಂದು ಬಂಗಾರದ ಕರುವನ್ನು ದಾನ್ ನಗರದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:29
21 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.


‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.


ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.


ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.


ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.


ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.


ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.


ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,


ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು