Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:1
23 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.


ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.


ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’


ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.


ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.


ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.


ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.


ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.


ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.


ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.


ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ


ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.


“ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು