Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನನ್ನು ಹಿಂದಕ್ಕೆ ಕರಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ - ಆ ಶವವು ದೇವರ ಮನುಷ್ಯನದೇ ಆಗಿರಬೇಕು; ಅವನು ಯೆಹೋವನ ಆಜ್ಞೆಗೆ ಅವಿಧೇಯನಾದದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಪ್ರವಾದಿಯು ಆ ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:26
11 ತಿಳಿವುಗಳ ಹೋಲಿಕೆ  

ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.


ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.


ಅವನು, “ಕತ್ತೆಗೆ ತಡಿಹಾಕಿರಿ” ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು