Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:27
11 ತಿಳಿವುಗಳ ಹೋಲಿಕೆ  

ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.


“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.


ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.


ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.


ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.


ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.


ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.


ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು