Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವನು ಇಸ್ರಾಯೇಲ್ಯರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರೋಧವಾಗಿ ಒಳಸಂಚು ಮಾಡಿ ಇವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:27
15 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ?


ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,


ಎಲ್ತೆಕೇ, ಗಿಬ್ಬೆತೋನ್, ಬಾಲತ್,


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.


ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.


ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.


ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.


ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.


ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು