Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತಾನು ಮಾಡಿದ ಪಾಪಗಳ ನಿಮಿತ್ತವಾಗಿಯೂ, ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:19
10 ತಿಳಿವುಗಳ ಹೋಲಿಕೆ  

ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.


ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು