Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:33
15 ತಿಳಿವುಗಳ ಹೋಲಿಕೆ  

ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.


ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.


ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು