Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರೋಧವಾಗಿ ಒಳಸಂಚುಮಾಡಿದನು. ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:9
28 ತಿಳಿವುಗಳ ಹೋಲಿಕೆ  

ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.


ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”


ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.


ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.


ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.


ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.


ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು