Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:29
19 ತಿಳಿವುಗಳ ಹೋಲಿಕೆ  

ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.


ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.


ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.


ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಹೋಯಿತು.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು