Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:40
17 ತಿಳಿವುಗಳ ಹೋಲಿಕೆ  

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.


ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,


ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು