Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:7
16 ತಿಳಿವುಗಳ ಹೋಲಿಕೆ  

ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.


ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.


ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.


“ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.


ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.


ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು.


ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು