Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:11
31 ತಿಳಿವುಗಳ ಹೋಲಿಕೆ  

ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,


ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.


ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.


ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.


ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;


ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು