Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂಕಂಪವಾದನಂತರ ಸಿಡಿಲುಂಟಾಯಿತು; ಅದರಲ್ಲಿಯೂ ಯೆಹೋವನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:12
15 ತಿಳಿವುಗಳ ಹೋಲಿಕೆ  

ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.”


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.


ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;


ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.


ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.


ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು