Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:2
21 ತಿಳಿವುಗಳ ಹೋಲಿಕೆ  

ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.


ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.


ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು