Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈಹೊತ್ತು ನಿನ್ನನ್ನು ಕೊಲ್ಲಿಸುವದಿಲ್ಲ ಎಂದು ಹೇಳಿ ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತಳ್ಳಿಬಿಟ್ಟನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೊಲೊಮೋನನು ಎಬ್ಯಾತಾರನಿಗೆ, “ನಾನು ನಿನ್ನನ್ನು ಯೆಹೋವನ ಯಾಜಕನಾಗಿ ಸೇವೆಯಲ್ಲಿ ಮುಂದುವರಿಸುವುದಿಲ್ಲ” ಎಂದು ಹೇಳಿದನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಇದು ಶೀಲೋವಿನಲ್ಲಿ ದೇವರು ಯಾಜಕನಾದ ಏಲಿಗೂ ಅವನ ಕುಟುಂಬದವರಿಗೂ ಹೇಳಿದಂತೆಯೇ ಆಯಿತು. ಎಬ್ಯಾತಾರನು ಏಲಿಯ ಗೋತ್ರದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:27
13 ತಿಳಿವುಗಳ ಹೋಲಿಕೆ  

ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,


ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.


ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.


ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು