Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. (ಅವನು ಅಬ್ಷಾಲೋಮನ ಪಕ್ಷವನ್ನು ಹಿಡಿಯದಿದ್ದರೂ ಅದೋನೀಯನ ಪಕ್ಷವನ್ನು ಹಿಡಿದಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:28
8 ತಿಳಿವುಗಳ ಹೋಲಿಕೆ  

ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.


ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.


ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು