Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:32
24 ತಿಳಿವುಗಳ ಹೋಲಿಕೆ  

ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.


ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.


ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.


ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.


ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.


ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,


ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.


ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.


ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.


ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.


“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು