Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:37
13 ತಿಳಿವುಗಳ ಹೋಲಿಕೆ  

ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.


ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.


ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.


ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು