Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವದನ್ನು ಬಲ್ಲೆಯಲ್ಲಾ; ಅವನು ಇಬ್ಬರು ಇಸ್ರಾಯೇಲ್ ಸೇನಾಪತಿಗಳಾದ ನೇರನ ಮಗ ಅಬ್ನೇರನನ್ನೂ ಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತ ಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:5
18 ತಿಳಿವುಗಳ ಹೋಲಿಕೆ  

ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,


ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?


ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.


“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು