Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನಿಗೇನು ಮಾಡಬೇಕೆಂಬದು ಬುದ್ಧಿವಂತನಾದ ನಿನಗೆ ಗೊತ್ತುಂಟಲ್ಲಾ; ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:6
18 ತಿಳಿವುಗಳ ಹೋಲಿಕೆ  

ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.


ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.


ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.


ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.


ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು