Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:9
13 ತಿಳಿವುಗಳ ಹೋಲಿಕೆ  

ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.


ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.


ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು