Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ - ಇಸ್ರಾಯೇಲ್ಯರ ದೇವರು ಬೆಟ್ಟಗಳ ದೇವರಾಗಿರುವದರಿಂದ ಅವರು ನಮ್ಮನ್ನು ಸೊಲಿಸಿದರು; ನಾವು ಅವರೊಡನೆ ಬೈಲಿನಲ್ಲಿ ಯುದ್ಧಮಾಡುವದಾದರೆ ಹೇಗೂ ಜಯಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:23
13 ತಿಳಿವುಗಳ ಹೋಲಿಕೆ  

ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!


ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.


ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.


ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು