Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಯೆಹೋವನು ಹೀಗನ್ನುತ್ತಾನೆ - ಯೆಹೋವನು ತಗ್ಗುಗಳ ದೇವರಲ್ಲ, ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:28
32 ತಿಳಿವುಗಳ ಹೋಲಿಕೆ  

ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.


ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.


ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.


ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.


ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು