Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ನನಗೆ ಜೀವದಾನಮಾಡಬೇಕೆಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ ಅಂದರು. ಆಗ ಅವನು - ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಹೀಗೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು’” ಎಂದರು. ಅಹಾಬನು, “ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:32
12 ತಿಳಿವುಗಳ ಹೋಲಿಕೆ  

ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.


ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.


ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು