Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಾನು ಬೇರೆ ಕೆಲಸದಲ್ಲಿದ್ದಾಗ ಆ ವ್ಯಕ್ತಿ ತಪ್ಪಿಸಿಕೊಂಡು ಹೋದನು,” ಎಂದು ಮೊರೆಯಿಟ್ಟನು. ಇಸ್ರಯೇಲರ ಅರಸನು ಇವನಿಗೆ, “ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೇ?’ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು ಎಂದು ಮೊರೆಯಿಟ್ಟನು. ಇಸ್ರಾಯೇಲ್ಯರ ಅರಸನು ಇವನಿಗೆ - ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೋ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಆ ಮನುಷ್ಯನು ಓಡಿಹೋದನು” ಎಂದು ಹೇಳಿದನು. ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಆ ಮನುಷ್ಯನೇನು ಹೇಳಿದನೊ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:40
10 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.


ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?


ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.


ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.


ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು