Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಅಧಿಕಾರಿಗಳ ಮನೆಗಳನ್ನು ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ತಿಳಿಸುತ್ತಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬದಾಗಿ ಬೆನ್ಹದದನು ಅನ್ನುತ್ತಾನೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ’” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:6
13 ತಿಳಿವುಗಳ ಹೋಲಿಕೆ  

ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.


ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.


ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.


ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು