Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಸಂಭವಿಸಿದ್ದೇನಂದರೆ - ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷೇತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:1
13 ತಿಳಿವುಗಳ ಹೋಲಿಕೆ  

ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು