Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ನಿನ್ನನ್ನು ಕುರಿತು - ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸರನ್ನು ನಾನು ಕೊಂದುಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:21
15 ತಿಳಿವುಗಳ ಹೋಲಿಕೆ  

ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.


ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.


ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.


ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.


ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು