Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. “ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು. ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:4
21 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.


ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.


ಸೈತಾನನಿಗೆ ಅವಕಾಶಕೊಡಬೇಡಿರಿ.


ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.


ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.


ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.


ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.


ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.


ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.


ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.


ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.


ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು