Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು. ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಈ ಇಬ್ಬರು ರಾಜರು ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಬಳಿಯಲ್ಲಿದ್ದ ಸಿಂಹಾಸನಗಳ ಮೇಲೆ ಅವರು ಕುಳಿತಿದ್ದರು. ಅವರ ಎದುರಿನಲ್ಲಿ ಪ್ರವಾದಿಗಳೆಲ್ಲರೂ ನಿಂತಿದ್ದರು. ಪ್ರವಾದಿಗಳು ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:10
13 ತಿಳಿವುಗಳ ಹೋಲಿಕೆ  

ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.


ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.


ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.


ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,


ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.


ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು