Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ಯೆಹೋವನು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:14
19 ತಿಳಿವುಗಳ ಹೋಲಿಕೆ  

‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’


ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.


ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.


ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು