Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:31
10 ತಿಳಿವುಗಳ ಹೋಲಿಕೆ  

ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.


ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.


ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.


ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.


ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.


ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು